+918310000414
contact@kannadabookpalace.com
+918310000414
contact@kannadabookpalace.com
₹100.00
Timely Arrival:
5–10 Days
To Your Doorstep
UPI • Cards • Net Banking
100% Safe & Secure
On Orders Above
₹999
ಆನೆ ಬಂತೊಂದಾನೆ, ಯಾವೂರಾನೆ ಇಲ್ಲಿಗ್ಯಾಕೆ ಬಂತು? ತಾಯಿ ಹುಡುಕಿಕೊಂಡು ಬಂತು, ತಾಯಿ ಸಿಗದೆ ಬೇಜಾರಾಗಿ, ಬಾಲ ಅಲ್ಲಾಡಿಸ್ಕೊಂಡು ಹೋಯ್ತು…… ಎನ್ನುವ ಶಿಶುಗೀತೆಯನ್ನು ಗುಣುಗುಡುತ್ತಾ “ಭೈರ” ಎಂಬ ಈ ಮಕ್ಕಳ ಕಾದಂಬರಿ “ಭೈರಾಪುರ”ದ ಆನೆಯ ಹಿಂಡಿನ ಸುತ್ತಮುತ್ತ ಹೆಣೆದಿರುವ ಕಥಾನಕವಿದು. ನಮ್ಮ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಭೈರಾಪುರ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಯಾವಾಗಲೂ ಆನೆಗಳ ಹಿಂಡಿನ ಹಾವಳಿಯ ಕಥೆಯನ್ನು ಆಧಾರವಾಗಿಟ್ಟುಕೊಂಡು ಕಂಚುಗಾರನಹಳ್ಳಿ ಸತೀಶ್ ಪರಿಸರ ಕಾಳಜಿಯುಳ್ಳ ಕಾದಂಬರಿಯನ್ನು ಹೊರತಂದಿದ್ದಾರೆ. ಶ್ರೀಯುತರು ವೃತ್ತಿಯಲ್ಲಿ ಶಿಕ್ಷಕರಾಗಿದ್ದರೂ ಸಹ ಪ್ರವೃತ್ತಿಯಲ್ಲಿ ಸಾಹಿತ್ಯದ ಗೀಳನ್ನು ಬೆಳೆಸಿಕೊಂಡಿರುವುದು ತುಂಬಾ ಸಂತೋಷದ ವಿಷಯ. ಕಂಸ ಅವರ ಲೇಖನಿಯಿಂದ ಈಗಾಗಲೇ ಸ್ಯಾನಿಟರಿ ಪ್ಯಾಡ್, ಬಂಗಾರದ ಹನಿಗಳು, ಮುಂದೇನಾಯ್ತು?, ಚಿಂಟು ಪಿಂಟು ಮತ್ತು ಮಿಂಚುವಿನ ಸಂಚಲನ ಮತ್ತು ನನ್ನವಳು ನಕ್ಕಾಗ ಎಂಬ ಕೃತಿಗಳು ಬಿಡುಗಡೆಯಾಗಿ ಓದುಗರ ಮನ ಸೂರೆಗೊಂಡಿವೆ. ಕಂಚುಗಾರನಹಳ್ಳಿ ಸತೀಶ್ ಅವರು ನಮ್ಮ ಜಿಲ್ಲೆಯ ನಮ್ಮ ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿಯ ಪುಟ್ಟ ಗ್ರಾಮವಾದ ಕಂಚುಗಾರನಹಳ್ಳಿಯವರು. ಶ್ರೀಯುತರು ಪ್ರಸ್ತುತ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಬೆನಕನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2026 Kannada Book Palace All Rights Reserved
Reviews
There are no reviews yet.