+918310000414
contact@kannadabookpalace.com
+918310000414
contact@kannadabookpalace.com
Timely Arrival: 4-8 Days to Your Doorstep
Safe and Secure: Your Payments Protected
Above order amount: 999
ಶ್ರೀ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರು ಕನ್ನಡದ ವಿಶಿಷ್ಟ ಲೇಖಕರು. ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಬೆಳೆದ ಭಾವಕೋಶವುಳ್ಳ ಗೊರೂರರ ಸಾಹಿತ್ಯವು ಸಾಮಾಜಿಕ -ರಾಜಕೀಯ ಇತಿಹಾಸದ ಕೆಲವು ಮಹತ್ವಪೂರ್ಣ ಗುರುತುಗಳನ್ನು ದಾಖಲಿಸಿದೆ. ಕತೆ, ಪ್ರಬಂಧ, ಲಲಿತ ಪ್ರಬಂಧ -ಹೀಗೆ ಯಾವುದೇ ಪ್ರಕಾರದಲ್ಲಿ ಬರೆದರೂ ಪರಸ್ಪರ ಸಂಬಂಧ ಸ್ಥಾಪಿಸುವ ಶೈಲಿಯನ್ನು ರೂಢಿಸಿಕೊಂಡ ಗೊರೂರರು ಬದುಕಿನ ಚಲನಶೀಲತೆಗೆ ಎಂದೂ ಬೆನ್ನು ತೋರಿಸಿದವರಲ್ಲ. ಹೀಗಾಗಿ ಅವರ ಸಾಹಿತ್ಯವು ಚಲನಶೀಲ ಮೌಲ್ಯಗಳನ್ನು ಒಳಗೊಳ್ಳುತ್ತಲೇ ಸಮಕಾಲೀನವಾಗುತ್ತದೆ ; ವರ್ತಮಾನದಲ್ಲಿ ಉಸಿರಾಡುತ್ತದೆ. ಗೊರೂರು ಸಾಹಿತ್ಯದಲ್ಲಿ ಮೈತಳೆದ ಕೆಲವು ವ್ಯಕ್ತಿಚಿತ್ರಗಳು ಸಾಂಸ್ಕೃತಿಕ ಚೌಕಟ್ಟಿನ ಸಾಮಾಜಿಕ ಅಂತಃಸತ್ವವಾಗಿ ಅರಳುತ್ತವೆ. ಸರಳ, ಸಂವಹನಶೀಲ ಸಾಹಿತ್ಯರಚನೆಯ ಮೂಲಕ ಸಂಕೀರ್ಣ ಬದುಕಿನ ವಿವರಗಳನ್ನು ನಿರೂಪಿಸುವ ಗೊರೂರರು ತಮಗೆ ತಾವೇ ಒಂದು ಮಾದರಿಯಾಗಿದ್ದಾರೆ. ಈ ಮಾದರಿಯೊಂದಿಗೆ ನಡೆಸುವ ಮಾತುಕತೆಯ ಮೂಲಕ ಅರ್ಥಪೂರ್ಣ ಚಿಂತನೆ ಹೊರಹೊಮ್ಮುವಂತಾಗಲಿ. ಶ್ರೀ ಸಂಜಯ ಅಡಿಗ ಅವರು ಗೊರೂರರ ಎಲ್ಲ ಕೃತಿಗಳ ಮರುಮುದ್ರಣ ಮಾಡಿದ್ದು, ಇದು ಮರು ಚಿಂತನೆಗೆ ಪ್ರೇರಣೆಯಾಗಲಿ.
-ಪ್ರೊ. ಬರಗೂರು ರಾಮಚಂದ್ರಪ್ಪ
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2025 Kannada Book Palace All Rights Reserved
Reviews
There are no reviews yet.